ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
Cross references
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.