ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
Cross references
ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.