ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
Cross references
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.