ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
Cross references
ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.