ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
Cross references
ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ