ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
Cross references
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
ಆದದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು; ಪರ್ವತ ಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾ ದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ಅನ್ಯಜನಾಂಗಗಳ ಅವಮಾನವನ್ನು ನೀನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರ ದಿಂದಲೂ ಮಾತನಾಡಿದ್ದೇನೆ.
ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.