ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
Cross references
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.