ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
Cross references
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.