ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
Cross references
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.