ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
Cross references
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.