ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
Cross references
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.