ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
Cross references
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.