ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.