ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
Cross references
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.