ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.