ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
Cross references
ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
ಕರ್ತನು ಮೋಶೆಯ ಸಂಗಡ ಮಾತ ನಾಡಿ--
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.