ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
Cross references
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.