ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.