ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
Cross references
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.