ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
Cross references
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.