ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
Cross references
ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.