ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
Cross references
ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--
ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ