ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
Cross references
ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.