ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
Cross references
ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ