ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
Cross references
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.