ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
Cross references
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.