ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Cross references
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.