ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
Cross references
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.