Home Bibles ಎಜ್ರಾ 6:22 · ಕನ್ನಡ ಬೈಬಲ್
ಎಜ್ರಾ 6:22 · ಕನ್ನಡ ಬೈಬಲ್

ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.

Cross references

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ನಿರ್ಗಮಕಾಂಡ 13:6

ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.

2 ಅರಸುಗಳು 23:29

ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

2 ದಿನವೃತ್ತಾಂತ 23:18

ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.

2 ದಿನವೃತ್ತಾಂತ 29:30

ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.

2 ದಿನವೃತ್ತಾಂತ 30:21

ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.

2 ದಿನವೃತ್ತಾಂತ 33:11

ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.

2 ದಿನವೃತ್ತಾಂತ 35:17

ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.

ಎಜ್ರಾ 1:1

ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--

ಎಜ್ರಾ 6:6

ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.

ಎಜ್ರಾ 7:27

ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

ಸಾಮೇತಿಗಳು 16:7

ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

ಸಾಮೇತಿಗಳು 21:1

ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

ಜೆಕರ್ಯ 10:10

ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.

ಮತ್ತಾಯ 26:17

ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

1 ಕೊರಿಂಥದವರಿಗೆ 5:7

ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

Interlinear

Choose Theme