ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
Cross references
ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.
ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.