ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
Cross references
ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.