ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
Cross references
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.
ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.