ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
Cross references
ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.