ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
Cross references
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?