ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
Cross references
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.
ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.