ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Cross references
ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.