ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
Cross references
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.
ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.