ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
Cross references
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.