Home Bibles ಗಲಾತ್ಯದವರಿಗೆ 2:11 · ಕನ್ನಡ ಬೈಬಲ್
ಗಲಾತ್ಯದವರಿಗೆ 2:11 · ಕನ್ನಡ ಬೈಬಲ್

ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

Cross references

ನಿರ್ಗಮಕಾಂಡ 32:21

ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.

ಅಂಕೆಗಳ ಪುಸ್ತಕ 20:12

ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

ಯೆರೆಮಿಯ 1:17

ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

ಯೋನ 1:3

ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.

ಯೋನ 4:3

ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

ಯೋನ 4:9

ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

ಮತ್ತಾಯ 16:17

ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ಮತ್ತಾಯ 16:23

ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.

ಅಪೋಸ್ತಲರ ಕೃತ್ಯಗಳು 11:19

ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಅಪೋಸ್ತಲರ ಕೃತ್ಯಗಳು 15:1

ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

ಅಪೋಸ್ತಲರ ಕೃತ್ಯಗಳು 15:30

ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.

ಅಪೋಸ್ತಲರ ಕೃತ್ಯಗಳು 15:37

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

ಅಪೋಸ್ತಲರ ಕೃತ್ಯಗಳು 23:1

ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.

2 ಕೊರಿಂಥದವರಿಗೆ 5:16

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

2 ಕೊರಿಂಥದವರಿಗೆ 11:5

ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.

2 ಕೊರಿಂಥದವರಿಗೆ 11:21

ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.

2 ಕೊರಿಂಥದವರಿಗೆ 12:11

ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.

ಗಲಾತ್ಯದವರಿಗೆ 2:5

ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.

ಗಲಾತ್ಯದವರಿಗೆ 2:7

ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

ಗಲಾತ್ಯದವರಿಗೆ 2:9

ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

ಗಲಾತ್ಯದವರಿಗೆ 2:14

ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ

1 ತಿಮೋಥೆಯ 5:20

ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

ಯಾಕೋಬ 3:2

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

1 ಯೋಹಾನ 1:8

ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

ಯೂದ 1:3

ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

Interlinear

Choose Theme