ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
Cross references
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.