ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
Cross references
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.