ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
Cross references
ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ