ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
Cross references
ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.