ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
Cross references
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.