ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
Cross references
ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು