ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
Cross references
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.