ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
Cross references
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.