Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;