ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
Cross references
ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.