ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
Cross references
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.